ಮಂಡ್ಯ : ಮನೆ ಕಳ್ಳರಿಗೆ ಸಹಕಾರ ನೀಡುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ಜಿಲ್ಲೆಯ ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮದ್ದೂರು ತಾಲೂಕಿನ ಕೊಪ್ಪ ಠಾಣೆಯ ಕಾನ್ಸ್ ಟೇಬಲ್ ಕೆಂಡಗಣ್ಣಯ್ಯ, ಡಾಲಿ, ಭವನ್, ಸಾದನ್, ಅಯೂಬ್, ಮುನ್ನಾ, ಪ್ರಸಾದ್, ಫಯಾಜ್ ಎಂಬುವವನನ್ನ ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ 1 ಕೆಜಿ 486 ಗ್ರಾಂ ಚಿನ್ನಾಭರಣ, 1.70 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ. ಮನೆಗಳ್ಳತನ ಆರೋಪಿಗಳಿಗೆ ಪಿಸಿ ಕೆಂಡಗಣ್ಣಯ್ಯ ಸಹಾಯ ಮಾಡುತ್ತಿದ್ದರು. ಕಳೆದ ತಿಂಗಳು ಮದ್ದೂರಿನಲ್ಲಿ ವೈದ್ಯ ಚಂದ್ರು ಮನೆಯಲ್ಲಿ ಕಳ್ಳತನ ನಡೆದಿದ್ದು, ಆರೋಪಿಗಳು 1 ಕೆಜಿ ಚಿನ್ನಾಭರಣ ಹಾಗೂ 8 ಲಕ್ಷ ರೂ. ನಗದು ದೋಚಿದ್ದರು. ಆರೋಪಿಗಳು ಕದ್ದ ಚಿನ್ನಾಭರಣವನ್ನು ಕೆಂಡಗಣ್ಣಯ್ಯ ಅಡವಿಟ್ಟುಕೊಡುತ್ತಿದ್ದರು. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿತ್ತು.