ನಾಳೆ ಮಧ್ಯಾಹ್ನ 1.35ಕ್ಕೆ ವಿಶೇಷ ವಿಮಾನದಲ್ಲಿ ಧಾರವಾಡಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್ ಭೇಟಿ ನೀಡಲಿದ್ದಾರೆ. ಧಾರವಾಡದ ಐಐಟಿ ಕ್ಯಾಂಪಸ್ಗೆ ಭೇಟಿ ನೀಡಲಿರುವ ಜಗದೀಪ್ ಮಧ್ಯಾಹ್ನ 2.30ಕ್ಕೆ ಧಾರವಾಡ ಐಐಟಿಗೆ ಭೇಟಿ ನೀಡಲಿರುವ ಅವರು, ಮೈನ್ ಗೇಟ್ ಕ್ಯಾಂಪಸ್, ಕೆಆರ್ಡಿಸಿ, ಸಿಎಲ್ಟಿ ಉದ್ಘಾಟನೆ ಮಾಡಲಿದ್ದಾರೆ. ರೂಪ್ ಟಾಪ್ ಸೋಲಾರ್ ಪ್ಯಾನಲ್ ಫೆಸಿಲಿಟಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ಎಂ.ಎಂ.ಜೋಶಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ.