ಮೈಸೂರು: ನೀವು ಕಾಂಗ್ರೆಸ್ ಗೆ ಓಟ್ ಹಾಕಿದ್ರೆ ತಾಲಿಬಾನಿ ಸರ್ಕಾರ ಬರುತ್ತೆ ಎಂದಿದ್ದೆ. ಇವತ್ತು ತಾಲಿಬಾನಿ ಸರ್ಕಾರ ನಡೀತಿದೆ ಎಂಬುದಕ್ಕೆ ಬಹಳಷ್ಟು ಘಟನೆಗಳು ಸಾಕ್ಷಿ ಆಗಿದೆ ಎಂದು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಒಳಗೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮೊಳಗಿದೆ ಅಂದ್ರೆ ಯಾರು ಅಧಿಕಾರ ಮಾಡ್ತಿದ್ದಾರೆ ಅನ್ನೋದು ಸ್ಪಷ್ಟ ಆಗಿದೆ. ಕಾಂಗ್ರೆಸ್ ಮುಂದುವರಿದರೆ ವಿಧಾನಸೌಧ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದ್ರೂ ಆಶ್ಚರ್ಯ ಪಡಬೇಡಿ. ಹಿಂದೆ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಹತ್ತು ವರ್ಷಗಳ ಕಾಲ ಸರಣಿ ಬಾಂಬ್ ಬ್ಲಾಸ್ಟ್ಗಳು ನಡೆದಿದ್ದವು. ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಹಾಗಾಗಿ ಬಾಂಬ್ ಬ್ಲಾಸ್ಟ್ಗಳು ಪ್ರಾರಂಭವಾಗಿದೆ. ಇದು ಟ್ರೈಲರ್ ಅಷ್ಟೆ, ಮುಂದೆ ಇನ್ನೂ ದುರ್ಘಟನೆಗಳು ಕಾದಿವೆ ಎಂದು ಹೇಳಿದರು. ಅಲ್ಲದೆ ಆದಷ್ಟು ಬೇಗ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನವನ್ನು ಬಿಜೆಪಿ ಜೆಡಿಎಸ್ ಮೈತ್ರಿಕೂಟಕ್ಕೆ ಕೊಟ್ಟು ಗೆಲ್ಲಿಸಿ.ಆ ಮೂಲಕ ಈ ಸರ್ಕಾರ ತೊಲಗಲು ಅವಕಾಶ ಮಾಡಿಕೊಟ್ರೆ ಕರ್ನಾಟಕ ಉಳಿಯುತ್ತೆ, ಇಲ್ಲದಿದ್ರೆ ಗಂಡಾಂತರ ಕಾದಿದೆ ಎಂದು ಹೇಳಿದರು.