ಮೈಸೂರು: ಲೋಕಸಭಾ ಚುನಾವಣೆಯ ಮೊದಲ ಪಟ್ಟಯಲ್ಲಿ ಕರ್ನಾಟಕದ ಕ್ಷೇತ್ರಗಳ ಹೆಸರು ಘೋಷಣೆ ಆಗದ ವಿಚಾರಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸುವ ರಾಜ್ಯಗಳಲ್ಲಿ ಹೆಸರು ಘೋಷಣೆ ಆಗಿದೆ. ಎಲ್ಲೆಲ್ಲಿ ಮೈತ್ರಿ ಇದೆ, ಅಲ್ಲಿನ ಕ್ಷೇತ್ರಗಳ ಹೆಸರು ಘೋಷಣೆ ಆಗಬೇಕು. ಮುಂದಿನ ದಿನಗಳಲ್ಲಿ, ಚರ್ಚೆ ನಡೆದು ಸೀಟ್ ಹಂಚಿಕೆ ಆದ ನಂತರ ಘೋಷಣೆ ಮಾಡಬೇಕಾಗುತ್ತೆ. ಕೇಂದ್ರ ನಾಯಕರು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.