ವಿಜಯಪುರ : ಕಾಂಗ್ರೆಸ್ ಸರ್ಕಾರದಲ್ಲಿ 50% ಭ್ರಷ್ಟಾಚಾರ ನಡೆಯುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೇ.13ರಷ್ಟು ಕಮಿಷನ್ ಇಲ್ಲದೆ ಗುತ್ತಿಗೆದಾರರಿಗೆ ಎನ್.ಒಸಿ ನೀಡುತ್ತಿಲ್ಲ. ಎಲ್ಲವೂ ಸೇರಿದರೆ ಶೇಕಡಾ 50ರಷ್ಟು ಕಮಿಷನ್ಗೆ ಬಂದು ನಿಲ್ಲುತ್ತದೆ. ನಮ್ಮ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡುತ್ತಿದ್ದರು. ಆದರೆ ಇವರು 50 ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದಾರೆ. ಬಿಬಿಎಂಪಿ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಇದೆ. ನಿಮ್ಮ ಸರ್ಕಾರವೇ ಉತ್ತಮ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ. ವಿಜಯೇಂದ್ರ ಉತ್ತಮವಾಗಿದ್ದರು ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ ಎಂದರು.