ಮೈಸೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಒಂದು ಕಡೆ ಮೂರು ಪಕ್ಷಗಳಿಂದ ತಯಾರಿ ಜೋರಾಗಿಯೇ ನಡೆಯುತ್ತಿದೆ. ಮತ್ತೊಂದು ಕಡೆ ಅಭ್ಯರ್ಥಿ ಆಯ್ಕೆ ಕಸರತ್ತುಗಳು ನಡೆಯುತ್ತಿವೆ. ಇನ್ನು ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮಾಸ್ಟರ್ ಪ್ಲಾನ್ ನಡೆಸಲಾಗುತ್ತಿದೆ. ಹೌದು ಶಿವರಾತ್ರಿ ನಂತರ ಮೈಸೂರು ಜಿಲ್ಲೆಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಾಗಲಿದ್ದು, ಬಿಜೆಪಿ ಶಾಸಕನನ್ನು ಕರೆತಂದು ಕೈ ಟಿಕೆಟ್ ನೀಡಲು ಕಾಂಗ್ರೆಸ್ ನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಹಲವು ದಿನಗಳಿಂದ ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿರುವ ಕಾಂಗ್ರೆಸ್ , ಸದ್ಯ ಬಿಜೆಪಿಯಿಂದ ಹೆಚ್ಚು ಅಂತರ ಕಾಯ್ದುಕೊಂಡಿರುವ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪ್ಲಾನ್ ಮಾಡುತ್ತಿದೆ. ಮಾರ್ಚ್ 5 ಅಥವಾ 7 ರಂದು ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ನಂತರ ಮೈಸೂರಿಗೆ ಬಂದು ಎಸ್.ಟಿ.ಸೋಮಶೇಖರ್ ಆಕ್ಟೀವ್ ಆಗಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಒಕ್ಕಲಿಗರು ಹಾಗೂ ವೀರಶೈವರನ್ನು ವಿಶ್ವಾಸಕ್ಕೆ ಪಡೆದು ಮುನ್ನಡೆಯುವಂತೆ ಸೂಚನೆ ನೀಡಲಾಗಿದ್ದು, ಒಂದು ವೇಳೆ ಎಸ್.ಟಿ.ಸೋಮಶೇಖರ್ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ನಿಂತು ಗೆದ್ದರೆ ಯಶವಂತಪುರದಲ್ಲಿ ಮಗನಿಗೆ ಎಂ.ಎಲ್.ಎ ಟಿಕೆಟ್ ಕೊಡುವ ಸಾಧ್ಯತೆ ಇದೆ.