ಬೆಂಗಳೂರು, ಮಾರ್ಚ್ 6: ಅಂಬಾರಿ ಉತ್ಸವ ಬಸ್ಗಳಿಗೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಬಸ್ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಮತ್ತು ಪ್ರಯಾಣಿಕರ ಮೇಲೆ ನಿಗಾ ಇಡುವಂತೆ ಚಾಲಕ ಹಾಗೂ ನಿರ್ವಾಹಕರಿಗೆ ಸೂಚಿಸಲಾಗಿದೆ. ಬರುವ ಪ್ರಯಾಣಿಕರ ಚಲವಲನದ ಮೇಲೆ ಕಣ್ಣಿಡಲು ಸೂಚನೆ ನೀಡಲಾಗಿದೆ. ರಾಜ್ಯಾದ್ಯಂತ ಒಟ್ಟು 20 ಅಂಬಾರಿ ಉತ್ಸವ ಬಸ್ಗಳು ಕಾರ್ಯಾಚರಿಸುತ್ತಿವೆ. ಈ ಪೈಕಿ, ಬೆಂಗಳೂರಿನಲ್ಲಿ 16 ಹಾಗೂ ಕುಂದಾಪುರ ಮತ್ತು ಮಂಗಳೂರಿನಲ್ಲಿ 4 ಬಸ್ಗಳಿವೆ. ಅಂಬಾರಿ ಉತ್ಸವ ಎಸಿ ಸ್ಲೀಪರ್ ಕೋಚ್ ಬಸ್ಗಳಾಗಿದ್ದು, ಹೈದರಾಬಾದ್, ಚೆನ್ನೈ ಹಾಗೂ ಎರ್ನಾಕುಲಂಗೆ ಸಹ ಸಂಚರಿಸುತ್ತವೆ.