ಮೈಸೂರು: ಕುಡಿಯುವ ನೀರು, ಬರ ನಿರ್ವಹಣೆ, ಕೃಷಿ, ಮೇವು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಂಗಳವಾರ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಅಂತೆಯೇ, ಮೈಸೂರು ಜಿಲ್ಲಾಧಿಕಾರಿಗಳೊಂದಿಗೆಯೂ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಸಿದ್ದರಾಮಯ್ಯ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೂ ನೀರಿನ ಸಮಸ್ಯೆಯಾಗದಂತೆ ಜಾಗ್ರತೆ ವಹಿಸಬೇಕೆಂದು ಸೂಚಿಸಿದರು.ಅಲ್ಲದೆ ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು. ಕುಡಿಯುವ ನೀರು ಕೊರತೆ, ಬೆಳೆಹಾನಿ, ಮೇವು ಕೊರತೆ ಸೇರಿದಂತೆ ಇದುವರಗೆ ಆಗಿರುವ ಸಮಸ್ಯೆಗಳು ಮತ್ತು ಮುಂದೆ ಉಸ್ಭವಿಸಬಹುದಾದ ಸಮಸ್ಯೆಗಳ ನಿವಾರಣೆಗೆ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು