ಹುಬ್ಬಳ್ಳಿ : ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಕ್ಕೆ ಜಗದೀಶ ಶೆಟ್ಟರ್ ಸದ್ಯದಲ್ಲಿಯೇ ಪಶ್ಚಾತಾಪದ ಹೇಳಿಕೆ ನೀಡಲಿದ್ದಾರೆ. ಇನ್ನೊಂದು ತಿಂಗಳು ಕಾದು ನೋಡಿ ಅವರಿಂದ ಪಶ್ಚಾತಾಪದ ಹೇಳಿಕೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇವಲ ಇಬ್ಬರು ಮೂವರಲ್ಲ ಬಿಜೆಪಿಯಿಂದ ಅನೇಕ ಜನ ಕಾಂಗ್ರೆಸ್ಗೆ ಆಗಮಿಸಲಿದ್ದಾರೆ ಎಂದು ಹೇಳಿದರು. ಇದೇ ವೇಳೆ ಇಡಿ ಪ್ರಕರಣ ರದ್ದಾಗಿರುವ ಬಗ್ಗೆ ಮಾತನಾಡಿ, ಇಡಿ ದಾಳಿಯಾದಾಗ ಒಂದು ರೀತಿ, ಬಂಧನ ಆದಾಗ ಒಂದು ರೀತಿ ತೋರಿಸ್ತೀರಿ. ಈಗ ಸುಮ್ಮನೇ ಇದೀರಾ ಎಂದು ಮಾಧ್ಯಮದವರನ್ನು ಡಿಕೆ ಶಿವಕುಮಾರ್ ಪ್ರಶ್ನಿಸಿದರು.
Leave a comment