ಮಂಡ್ಯ : ದುಡ್ಡಿನಿಂದ ಮಂಡ್ಯ ಜನರನ್ನ ಕೊಂಡುಕೊಳ್ಳಲು ಆಗಲ್ಲ ಎಂದು ಸಂಸದೆ ಸುಮಲತಾ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಲೋಕ ಸಭಾ ಚುನಾವಣೆ ಸಂಬಂಧ ಮಂಡ್ಯದಲ್ಲಿ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ದುಡ್ಡು ಪಡೆಯುವ ಸಂಸ್ಕೃತಿ ಇದೆ. ಪಕ್ಷಕ್ಕೆ ಕನೆಕ್ಷನ್ ಇಲ್ಲದವರನ್ನ ಅಭ್ಯರ್ಥಿ ಮಾಡಿದ್ದಾರೆ. ಬೂದನೂರ ಉತ್ಸವ ಸರ್ಕಾರಿ ಹಣದಲ್ಲಿ ನಡೆದಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಮಂಡ್ಯ ಲೋಕಸಭಾ ಅಭ್ಯರ್ಥಿ ಎಂದು ಪರಿಚಯ ಮಾಡ್ತಾರೆ. ಸರ್ಕಾರಿ ಹಣ ಬಳಸಿ ನಿಮ್ಮ ಅಭ್ಯರ್ಥಿ ಪರಿಚಯಿಸುತ್ತೀರಾ? ಹಾಗಾದ್ರೆ ನೀವು ಹೇಗೆ ಎಲೆಕ್ಷನ್ ಮಾಡ್ತೀರಾ? ಕಾಂಗ್ರೆಸ್ ಪಕ್ಷದಲ್ಲಿ ದುಡ್ಡಿರುವವರಿಗೆ ಮಣೆ ಹಾಕುತ್ತಾರೆ. ಮಂಡ್ಯ ಜನ ದಡ್ಡರಲ್ಲ, ಯಾವ ಕಾರಣಕ್ಕೆ ಅಭ್ಯರ್ಥಿ ಮಾಡ್ತಿದ್ದಾರೆ ಅನ್ನೋದು ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಬಿಜೆಪಿ ಸೇರದವರಿಗೆ ಟಿಕೆಟ್ ಯಾಕೆ ಎಂಬ ಕೆಲ ಬಿಜೆಪಿ ನಾಯಕ ಅಪಸ್ವರ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಸಂಸದೆ, ಬಿಜೆಪಿ ಸೇರದಿರುವುದಕ್ಕೆ ಟೆಕ್ನಿಕಲ್ ಕಾರಣ ಇದೆ. ಈ ಅವಧಿ ಮುಗಿದ ಮೇಲೆ ಪಕ್ಷಕ್ಕೆ ಸೇರ್ಪಡೆ ಆಗ್ತೇನೆ. ಈ ವಿಚಾರ ದೊಡ್ಡದು ಮಾಡುವುದರಲ್ಲಿ ಅರ್ಥ ಇಲ್ಲ ಎಂದರು.