ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಓರ್ವ ವ್ಯಕ್ತಿಯನ್ನು ಪೊಲೀಸ್ ವಶಕ್ಕೆ ನೀಡಿ ಬೆಂಗಳೂರಿನ 39ನೇ ಎಸಿಎಂಎಂ ಕೋರ್ಟ್ನಿಂದ ಆದೇಶ ಹೊರಡಿಸಲಾಗಿದೆ. ಮೂವರು ಆರೋಪಿಗಳನ್ನ ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ನಾಶಿಪುಡಿನನ್ನು 1 ದಿನ ಪೊಲೀಸ್ ಕಸ್ಟಡಿಗೆ ನೀಡಿ ಮುನಾವರ್ ಹಾಗೂ ಇಲ್ತಾಜ್ಗೆ ನ್ಯಾಯಾಂಗ ಬಂಧನ ಆದೇಶಿಸಲಾಗಿದೆ. ವಿಧಾನಸೌಧ ಠಾಣೆ ಪೊಲೀಸರು ಆರೋಪಿಗಳ ಪೂರ್ವಾಪರ ವಿಚಾರಣೆ ಮಾಡಿದ್ದಾರೆ. ಈಗಾಗಲೇ ಆರೋಪಿಗಳ ಧ್ವನಿ ಪರೀಕ್ಷೆ ವರದಿಯನ್ನು ಎಫ್ಎಸ್ಎಲ್ ನೀಡಿದೆ. ಆದರೂ ಹೆಚ್ಚಿನ ಮಾಹಿತಿಗಾಗಿ ಅಹಮದಾಬಾದ್ FSLಗೆ ಸ್ಯಾಂಪಲ್ ರವಾನೆ ಮಾಡಲಾಗಿದೆ.ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಇಂದಿಗೆ ಮುಕ್ತಾಯವಾಗಿದೆ. ಆರೋಪಿಗಳ ಹೇಳಿಕೆ ಹೊರತಾಗಿ ಮತ್ತಷ್ಟು ಮಾಹಿತಿಗಾಗಿ ತನಿಖೆ ಮಾಡಲಾಗುತ್ತಿದೆ. ಆರೋಪಿಗಳ ಅವಶ್ಯಕತೆ ಇಲ್ಲದ ಕಾರಣ ವೈಜ್ಞಾನಿಕ ವಿಚಾರಗಳು ಬಂದ ನಂತರ ಹೆಚ್ಚಿನ ತನಿಖೆಗೆ ನಿರ್ಧರಿಸಲಾಗಿತ್ತು.