ಮೈಸೂರು, ಮಾ.07: ಜಿಲ್ಲೆಯ ನಂಜನಗೂಡಿನ ಹಂಡುವಿನಹಳ್ಳಿ ಗ್ರಾಮದ ಸಾಮಾಜಿಕ ಅರಣ್ಯ ವಲಯದಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದು, 50 ಕ್ಕೂ ಹೆಚ್ಚು ಎಕರೆ ಪ್ರದೇಶ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿ ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇನ್ನು 150 ಎಕರೆ ಪ್ರದೇಶದಲ್ಲಿ ಈ ಕುರುಚಲು ಅರಣ್ಯ ಪ್ರದೇಶ ಇದ್ದು, ಅಕ್ರಮವಾಗಿ ಮಣ್ಣು ಸಾಗಾಟ ಮಾಡುವ ಲ್ಯಾಂಡ್ ಮಾಫಿಯ ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿದೆ ಎಂದ ಆರೋಪ ಕೇಳಿಬಂದಿದೆ.