ಮಂಡ್ಯ: ಸ್ಥಳೀಯರಿಂದ ಸ್ಟಾರ್ ಚಂದ್ರು ಎಂದು ಗುರುತಿಸಲ್ಪಡುವ ಉದ್ಯಮಿ ವೆಂಕಟರಮಣೇಗೌಡ ಅವರಿಗೆ ಕಾಂಗ್ರೆಸ್ ಪಕ್ಷವು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದೆ. ಟಿಕೆಟ್ ಘೋಷಣೆಯಾದ ಬಳಿಕ ಸಂತಸದಿಂದ ಬೀಗುತ್ತಿದ್ದ ಚಂದ್ರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಚಂದ್ರಶೇಖರ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮತ್ತು ಮಂಡ್ಯದ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದರು. ಶಿವರಾತ್ರಿಯ ಶುಭದಿನದಲ್ಲಿ ಟಿಕೆಟ್ ಸಿಕ್ಕಿರುವುದು ತನ್ನ ಅದೃಷ್ಟವೆಂದು ಹೇಳಿದ ಚಂದ್ರು ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮವಹಿಸಿ ಕೆಲಸ ಮಾಡುವುದಾಗಿ ಹೇಳಿದರು. ನಾಗಮಂಗಲ ತಾಲ್ಲೂಕು ಕನ್ನಾಘಟ್ಟ ಗ್ರಾಮದವರಾಗಿರುವ 58-ವರ್ಷ ವಯಸ್ಸಿನ ಚಂದ್ರು, ತಮ್ಮ ಕುಟುಂಬದವರೆಲ್ಲ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ ಮತ್ತು ತಾನೂ ಒಬ್ಬ ನಿಷ್ಠಾವಂತ ಕಾರ್ಯಕರ್ತ ಎಂದು ಹೇಳಿದರು. ಸಂಸತ್ತಿಗೆ ಆಯ್ಕೆಯಾದರೆ ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಎಲ್ಲ ಕಾರ್ಯಕ್ರಮಗಳ ಸೂಕ್ತ ಅನುಷ್ಠಾನಕ್ಕೆ ಶ್ರಮಿಸುವುದಾಗಿ ಚಂದ್ರು ಹೇಳಿದರು.