ಮಂಗಳೂರು : ಹೆತ್ತ ತಾಯಿನ ಬಿಟ್ಟು ಕೊಡೋಕಾಗುತ್ತಾ ಎಂದು ಹೇಳುವ ಮೂಲಕ ನಟ ದರ್ಶನ ಈ ಬಾರಿಯೂ ಸಂಸದೆ ಸುಮಲತಾ ಅಂಬರೀಶ್ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪರೋಕ್ಷವಾಗಿ ಹೇಳಿದರು. ಈ ಬಾರಿಯೂ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತೀರಾ ಎಂಬ ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮೊನ್ನೆವರೆಗೂ ಸುಮಲತಾ ಅಮ್ಮನ ಜೊತೆ ಇದ್ದೆ. ಈಗ ಅಮ್ಮನ ಕೈಬಿಟ್ಟರೆ ಆಗುತ್ತಾ ಎಂದರು.
ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ಯಾಂಡಲ್ವುಡ್ ನಟ ದರ್ಶನ್ ಭೇಟಿ ಕೊಟ್ಟಿದ್ದಾರೆ. ಕೊರಗಜ್ಜನ ದರ್ಶನ ಪಡೆದ ದರ್ಶನ್ ಅವರು ಕೊರಗಜ್ಜನ ಆದಿಸ್ಥಳ ಕುತ್ತಾರು ಕೊರಗಜ್ಜ ದೇವಸ್ಥಾನಕ್ಕೆ ಇದೇ ಮೊದಲಬಾರಿಗೆ ಭೇಟಿ ಕೊಟ್ಟಿರುವುದು ವಿಶೇಷವಾಗಿದೆ. ಈ ವೇಳೆ ಮಾತನಾಡಿದ ಅವರು, ಮಂಗಳೂರಿಗೆ ಸುಮಾರು ಸಲ ಬಂದಿದ್ದೆ ಆದರೆ ಕುತ್ತಾರಿಗೆ ಬರಲು ಆಗಿರಲಿಲ್ಲ. ಕುತ್ತಾರು ಏನು ಡಿಫರೆನ್ಸ್ ಇಲ್ಲ ಎಲ್ಲ ದೇವಸ್ಥಾನ ಒಂದೇ. ಎಲ್ಲರು ಈ ಕ್ಷೇತ್ರದ ಬಗ್ಗೆ ಹೇಳುತ್ತಿದ್ದರು. ಹೀಗಾಗಿ ಭೇಟಿ ನೀಡಿ ಪ್ರಾರ್ಥಿಸಿದ್ದೇನೆ. ನಾನು ಭೇಟಿ ನೀಡಿದಕ್ಕೆ ಯಾವುದೇ XYZ ಕಾರಣ ಇಲ್ಲ ಎಂದರು.