ಮೈಸೂರು: ಜಿ.ಟಿ.ದೇವೇಗೌಡ ಕಾಂಗ್ರೆಸ್ ಸೇರುತ್ತಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ಶಾಸಕ ಜಿ.ಟಿ.ದೇವೆಗೌಡರೇ ಪ್ರತಿಕ್ರಿಯೆ ನೀಡಿದ್ದು, ಅಂತ ಯಾವ ಸಂದರ್ಭ ಬಂದಿಲ್ಲ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರಲ್ಲ. ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವುದೇ ನಮ್ಮ ಗುರಿ ಎಂದರು. ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಪರ ಶಾಸಕ ಜಿ.ಟಿ.ದೇವೆಗೌಡರು ಬ್ಯಾಟಿಂಗ್ ಮಾಡಿದರು. ನೂರಕ್ಕೆ ನೂರರಷ್ಟು ಪ್ರತಾಪ ಸಿಂಹರಿಗೆ ಟಿಕೆಟ್ ಸಿಗುತ್ತೆ. ನಾನು ಕಳೆದ ಎರಡು ಚುನಾವಣೆಯಲ್ಲಿ ಪ್ರತಾಪ್ ಸಿಂಹ ಬೆಂಬಲಿಸಿದ್ದೆ. ಈಗಲೂ ಬೆಂಬಲಿಸುತ್ತೇನೆ. ೧೦ ವರ್ಷದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ.ಅವರಿಗೆ ಟಿಕೆಟ್ ಸಿಗುವ ವಿಶ್ವಾಸ ಇದೆ. ಟಿಕೆಟ್ ತಪ್ಪುತ್ತೆ ಎಂಬ ವಿಚಾರ ನಮಗೆ ಗೊತ್ತಿಲ್ಲ. ತುಳಿಸಿ ದಾಸಪ್ಪ ನಂತರ ಮೈಸೂರಿನಿಂದ ಒಕ್ಕಲಿಗರು ಸಂಸದರಾಗಿದ್ದಾರೆ. ಪ್ರತಾಪ್ ಸಿಂಹರಿಗೆ ಟಿಕೆಟ್ ಸಿಗುತ್ತೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.