ಮೈಸೂರು : ಮೈಸೂರು ಸಂಸದ ಪ್ರತಾಪ್ ಸಿಂಹರಿಗೆ ಈ ಬಾರಿಯ ಮೈಸೂರು ಲೋಕ ಸಭಾ ಟಿಕೆಟ್ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿ ಬರುತ್ತಿದ್ದು, ವಿ.ಸೋಮಣ್ಣ ಪರವಾಗಿ ನಿಂತಿದ್ದೆ ಪ್ರತಾಪ್ ಸಿಂಹರಿಗೆ ಮುಳುವಾಗುತ್ತಿದಿಯಾ ಎಂಬ ಮಾತುಗಳು ಕೇಳಿ ಬಂದಿವೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಮಾಜಿ ಸಚಿವ ಸೋಮಣ್ಣರ ಬೆನ್ನಿಗೆ ನಿಂತು ಹೋರಾಟ ಮಾಡಿದ್ರು. ಈ ವಿಚಾರ ಸೋಮಣ್ಣ ವಿರೋಧಿ ಬಣದ ಕೆಂಗಣ್ಣಿಗೆ ಗುರಿಯಾಗಿತ್ತು. ಚುನಾವಣೆಯಲ್ಲಿ ಸೋಮಣ್ಣರಿಗೆ ಸೋಲಾಗಿತ್ತು. ಈ ವೇಳೆ ಸೋಲಿಗೆ ಪಕ್ಷದ ನಾಯಕರ ಒಳೇಟೆ ಕಾರಣ ಎಂದು ಹೇಳಲಾಗಿತ್ತು. ಈ ವಿಚಾರವಾಗಿ ಸೋಮಣ್ಣ ಕೂಡ ಬಹಿರಂಗವಾಗೆ ಅಸಮಾಧಾನ ಹೊರ ಹಾಕಿದ್ರು. ಅಡ್ಜಸ್ಟ್ ಪಾಲಿಟಿಕ್ಸ್ ಅಂತ ಪ್ರತಾಪ್ ಸಿಂಹ ಕೂಡ ಹೇಳಿಕೆ ನೀಡಿದ್ರು. ಚುನಾವಣೆ ಮಾತ್ರವಲ್ಲ ಮೈಸೂರಿಗೆ ಸೋಮಣ್ಣ ಉಸ್ತುವಾರಿ ಸಚಿವರಾಗಿ ಬಂದಾಗಿನಿಂದ ಪ್ರತಾಪ್ ಸಿಂಹ, ಸೋಮಣ್ಣ ಬೆನ್ನಿಗೆ ನಿಂತಿದ್ದರು. ಸೋಮಣ್ಣ ಮೈಸೂರಿಗೆ ಬಂದಾಗ ಬಿಜೆಪಿ ಹಿರಿಯ ನಾಯಕರು ಜೊತೆಗೆ ನಿಲ್ಲಲಿಲ್ಲ. ಈ ವೇಳೆ ಪ್ರತಾಪ್ ಸಿಂಹ ಸೋಮಣ್ಣರಿಗೆ ಸಾಥ್ ನೀಡಿದ್ದರು. ಇದೆಲ್ಲ ಸೋಮಣ್ಣ ವಿರೋಧಿ ಬಣದವರ ಕೆಂಗಣ್ಣಿಗೆ ಗುರಿಯಾಗಿತ್ತು. ಸದ್ಯ ಈಗಲೂ ಪ್ರತಾಪ್ ಸಿಂಹರಿಗೆ ಟಿಕೆಟ್ ಮಿಸ್ ಮಾಡಿಸಲು ಇದೇ ಕಾರಣ ಎಂಬ ಚರ್ಚೆ ನಡೆಯುತ್ತಿದೆ.