ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, ಮೈಸೂರು ಅರಮನೆಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕ್ಷೇತ್ರದಲ್ಲಿ ಬಿಜೆಪಿ ಮಣೆ ಹಾಕಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದ ಪ್ರತಾಪ್ ಸಿಂಹ, ರಾಜ-ಪ್ರಜೆ ನಡುವಣ ವ್ಯತ್ಯಾಸ ಬದಿಗಿಟ್ಟು ಬಂದರೆ ಅವರಿಗೆ ಸ್ವಾಗತ. ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ ಎಂದಿದ್ದರು. ಈ ಹೇಳಿಕೆಗೆ ಕೌಂಟರ್ ಕೊಟ್ಟ ಮಾಜಿ ಶಾಸಕ ಎಸ್ಎ ರಾಮದಾಸ್ , ಯದುವೀರ್ ಒಡೆಯರ್ ಅವರು ಜನರ ಜೊತೆ ಬೆರಿತಾರಾ ಇಲ್ಲವಾ ಎಂಬುದನ್ನು ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮದಾಸ್, ಕಳೆದ ವಿಧಾನಸಭಾ ಚುನಾವಣೆ ವೇಳೆ ನನಗೂ ಟಿಕೆಟ್ ಮಿಸ್ ಆಯ್ತು. ಆಗ ನಾನು ಪಕ್ಷದಲ್ಲೇ ಉಳಿದುಕೊಂಡು ಕೆಲಸ ಮಾಡಿದೆ ಎಂದು ಹೇಳುವ ಮೂಲಕ ಟಿಕೆಟ್ ಕೈ ತಪ್ಪುವ ಬಗ್ಗೆ ಅಸಮಾಧಾನ ಹೊರಹಾಕುತ್ತಿಉರವ ಪ್ರತಾಪ್ ಸಿಂಹ ಅವರಿಗೆ ಟಾಂಗ್ ಕೊಟ್ಟರು. ಕೇಂದ್ರದಲ್ಲಿ ಇದುವರೆಗೂ ಅಭ್ಯರ್ಥಿ ಯಾರೆಂಬುದು ಅಂತಿಮವಾಗಿಲ್ಲ. ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಸುದ್ದಿಗೋಷ್ಠಿ ಕರೆದಿದ್ದೇವೆ. ಮೈಸೂರು ಅರಸರ ಕೊಡುಗೆಗಳ ಬಗ್ಗೆ ಅಪಾರ ಗೌರವವಿದೆ. ಯದುವೀರ ಒಡೆಯರ್ ರವರು ಜನರ ಜೊತೆ ಬೆರಿತಾರಾ ಇಲ್ಲವಾ ಎಂಬುದನ್ನು ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದರು. ರಾಮದಾಸ್ ಅವರು ಪಕ್ಷಕ್ಕಾಗಿ ಕೆಲಸ ಮಾಡಿದ್ದರು ಎಂದು ಪ್ರತಾಪ್ ಸಿಂಹರವರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವತ್ತಿಗೂ ನಮಗೆ ಪ್ರತಾಪಸಿಂಹ ಲೀಡರ್. ಅವರಿಗೆ ಗೌರವ ಕೊಟ್ಟೆ ಕೊಡುತ್ತೇವೆ. ಅವರಿಗೆ ಟಿಕೆಟ್ ಕೊಟ್ಟರು ಕೆಲಸ ಮಾಡುತ್ತೇವೆ. ನಾನು ಇನ್ನೊಬ್ಬರಿಗೆ ಪಾಠ ಮಾಡುವಷ್ಟು ದೊಡ್ಡವನಲ್ಲ. ನಾನು ಸೋತ ಬಳಿಕವು ಪಕ್ಷದ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ ಎಂದರು.