ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ಸಂಸದ ಪ್ರತಾಪ್ ಸಿಂಹ ಬದಲಿಗೆ ರಾಜವಂಶಸ್ಥ ಯದುವೀರ್ ಒಡೆಯರ್ ಗೆ ನೀಡಲಾಗುತ್ತಿದೆ ಎಂಬ ಚರ್ಚೆಗಳು ಸಾಕಷ್ಟು ಸದ್ದು ಮಾಡುತ್ತಿವೆ. ಹೀಗಾಗಿ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಪರವಾಗಿ ಪ್ರತಿಭಟನೆ ನಡೆಸಲಾಯಿತು. ಹಿನಕಲ್ ಫ್ಲೈ ಓವರ್ ಬಳಿ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ ಅಭಿಮಾನಿಗಳು ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು. ಅಲ್ಲದೆ ಬಡವರ ಮಕ್ಕಳು ಬೆಳೆಯಬಾರದ..? ಮೈಸೂರು ಹೈವೇ ಮಾಡಿದಕ್ಕಾಗಿ ಟಿಕೆಟ್ ಇಲ್ವಾ ಅಥವಾ ಟಿಪ್ಪು ರೈಲಿಗೆ ಒಡೆಯರ್ ಹೆಸರು ಇಟ್ಟಿದಕ್ಕೆ ಇಲ್ವಾ ? ಅಭಿವೃದ್ಧಿ ಕೆಲಸ ಮಾಡಿದಕ್ಕೆ ಟಿಕೆಟ್ ಇಲ್ವ ಎಂದು ಪ್ರಶ್ನೆ ಮಾಡಿ ಬೇಕೆ ಬೇಕು ಪ್ರತಾಪ್ ಸಿಂಹಗೆ ಟಿಕೆಟ್ ಬೇಕು. ದೇಶಕ್ಕಾಗಿ ಮೋದಿ, ಮೈಸೂರಿಗೆ ಪ್ರತಾಪ್ ಸಿಂಹ ಎಂದು ಘೋಷಣೆ ಕೂಗಿ ಸಿಂಹ ಪರ ಬ್ಯಾಟಿಂಗ್ ಮಾಡಿದರು.