ರಾಮನಗರ : ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ಒಳ್ಳೆಯ ಡಾಕ್ಟರ್. ಅವರು ರಾಜಕೀಯಕ್ಕೆ ಅಮಾಯಕರು. ಪಾಪ ಅಮಾಯಕರನ್ನು ತಂದು ಸ್ಪರ್ಧೆಗಿಳಿಸುತ್ತಿದ್ದಾರೆ. ಡಿ.ಕೆ ಸುರೇಶ್ ವಿರುದ್ಧ ಪಾಪ ಮಂಜುನಾಥ್ರವರನ್ನು ಹರಕೆ ಕುರಿ ಮಾಡುತ್ತಿದ್ದಾರೆ. ಯಾಕೆ ನಿಮಗೆ ತಾಕತ್ತಿಲ್ವಾ, ನಮಗೆ ಗಂಡಸ್ತನ ಇಲ್ವಾ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಮಂತ್ರಿ ಆಗಿದ್ರಲ್ಲ ಅವರಿಗೆ ನಿಲ್ಲಿಸಬಹುದಿತ್ತಲ್ವಾ ಎಂದು ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ಗೆ ಟಾಂಗ್ ನೀಡಿದ್ದಾರೆ. ಡಿಕೆ ಸುರೇಶ್ ವಿರುದ್ಧ ನಿಮಗೆ ಅಭ್ಯರ್ಥಿ ಇಲ್ಲವೆನ್ನುವುದು ತೋರಿಸುತ್ತೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಚಿಹ್ನೆ ಅಡಿ ಡಾ. ಮಂಜುನಾಥ್ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಜೆಡಿಎಸ್ ಅವನತಿಯತ್ತ ಸಾಗುತ್ತಿದೆ. ಇರುವ 19 ಜನ ಶಾಸಕರಲ್ಲಿ 12 ಕಾಂಗ್ರೆಸ್ ಬರಲಿದ್ದಾರೆ. ಜೆಡಿಎಸ್ನಲ್ಲಿ ಯಾವುದೇ ಸಿದ್ಧಾಂತ ಇಲ್ಲ. ಹಾಗಾಗಿ ಎಲ್ಲರೂ ಕಾಂಗ್ರೆಸ್ಗೆ ಬರಲು ಸಿದ್ಧರಾಗಿದ್ದಾರೆ. ಹತ್ತಕ್ಕೂ ಹೆಚ್ಚು ಶಾಸಕರು ಚುನಾವಣೆಗೂ ಮುಂಚೆ ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದಿದ್ದಾರೆ.