ಮೈಸೂರು: ಯದುವೀರ್ ಒಡೆಯರ್ ಅವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಯದುವೀರ್ ಒಡೆಯರ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ನಾಳೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಬೆಳಗ್ಗೆ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ಬಳಿಕ ಬೆಂಗಳೂರಿನತ್ತ ಪಯಣ ಬೆಳೆಸಿ ನಂತರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಲಿದ್ದಾರೆ.