ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಅದರಲ್ಲೂ ಮುಖ್ಯವಾಗಿ ಹಲವು ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದ್ದು, ಹೊಸ ಮುಖಗಳಿಗೆ ಮಣೆ ಹಾಕಿದೆ. ಒಟ್ಟು ಎಂಟು ಸಂಸದರಿಗೆ ಟಿಕೆಟ್ ಮಿಸ್ ಆಗಿದ್ದು, ಆರು ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮೈಸೂರು-ಪ್ರತಾಪ್ ಸಿಂಹ, ಬೆಂಗಳೂರು ಉತ್ತರ- ಡಿವಿ ಸದಾನಂದ ಗೌಡ, ಕೊಪ್ಪಳ- ಕರಡಿ ಸಂಗಣ್ಣ, ಹಾವೇರಿ-ಶಿವಕುಮಾರ್ ಉದಾಸಿ, ತುಮಕೂರು-ಜಿಎಸ್ ಬಸವರಾಜು , ದಕ್ಷಿಣ ಕನ್ನಡ-ನಳಿನ್ ಕುಮಾರ್ ಕಟೀಲ್, ಚಾಮರಾಜನಗರ-ಶ್ರೀನಿವಾಸ್ ಪ್ರಸಾದ್, ಬಳ್ಳಾರಿ- ದೇವೇಂದ್ರಪ್ಪ ಗೆ ಟಿಕೆಟ್ ಮಿಸ್ ಆಗಿದೆ. ಇನ್ನು ಜೆಡಿಎಸ್ ಗೆ ಮಂಡ್ಯ, ಹಾಸನ, ಕೋಲಾರ ಕ್ಷೇತ್ರವನ್ನು ಬಿಜೆಪಿ ಬಿಟ್ಟುಕೊಟ್ಟಿದೆ.