ಬೆಂಗಳೂರು : ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಇಂದು ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಹೇಗೆ ಎನ್ನುವ ಬಗ್ಗೆ ಚರ್ಚೆ ಮಾಡಿದ್ದಾರೆ. ಇದಕ್ಕೆ ಬಿಎಸ್ವೈ ಸಹ ಸ್ಪರ್ಧೆ ಮಾಡಿ ಗೆಲ್ಲುತ್ತೀರಿ ಎಂದು ಹೇಳಿದ್ದಾಗಿ ತಿಳಿದುಬಂದಿದೆ. ಹೀಗಾಗಿ ಅಂತಿಮವಾಗಿ ಶೆಟ್ಟರ್ ಬೆಳಗಾವಿಯಿಂದ ಕಣಕ್ಕಿಳಿಯಲು ಸಮ್ಮತಿ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶೆಟ್ಟರ್ ಬೆಳಗಾವಿ ಯಿಂದ ಸ್ಪರ್ಧೆ ಮಾಡಲು ಇಷ್ಟ ಇರಲಿಲ್ಲ. ನಾನು ಕರೆದು ಮಾತಾಡಿದ್ದೇನೆ. ಕೊನೆಗೆ ಅವರು ಬೆಳಗಾವಿಯಿಂದ ಸ್ಪರ್ಧೆ ಗೆ ಒಪ್ಪಿಕೊಂಡಿದ್ದಾರೆ. ಗೆಲ್ಲುತ್ತಾರೆ ಎಂದು ಹೇಳಿದ್ದಾರೆ.