ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ ಸಿಂಹಗೆ ಈ ಬಾರಿಯ ಬಿಜೆಪಿ ಟಿಕೆಟ್ ಕೈತಪ್ಪಿದೆ. ಮೈಸೂರು ರಾಜವಂಶಸ್ಥ ಯದುವೀರ ಒಡೆಯರ್ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ. ಎರಡು ಬಾರಿ ಸಂಸದರಾಗಿ 10 ವರ್ಷ ಸೇವೆ ಸಲ್ಲಿಸಿದ್ದ ಪ್ರತಾಪ್ ಸಿಂಹ ಅವರು ಮೂರನೆ ಸಲವೂ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. 10 ವರ್ಷಗಳ ಸಾಧನೆಯ ರಿಪೋರ್ಟ್ ಕಾರ್ಡ್ ಅನ್ನು ಕ್ಷೇತ್ರದ ಮತದಾರರಿಗೆ ತಲುಪಿಸಿದ್ದರು. ಆದರೆ ಬಿಜೆಪಿ ಹೊಸ ಅಭ್ಯರ್ಥಿಗೆ ಗಾಳ ಹಾಕಿದ್ದು ಯದುವೀರ ಒಡೆಯರ್ ಅವರಿಗೆ ಟಿಕೆಟ್ ನೀಡಿದೆ. ಸದ್ಯ ಡಿವಿಜಿ ಸಾಲು ಹಂಚಿಕೊಂಡು ವಿರೋಧಿಗಳಿಗೆ ಪ್ರತಾಪ್ಸಿಂಹ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಟಿಕೆಟ್ನಿಂದ ವಂಚಿತರಾದ ಪ್ರತಾಪ್ ಸಿಂಹ ಮಂಕಾಗಿದ್ದಾರೆ. ಸದ್ಯ ಪ್ರತಾಪ್ ಸಿಂಹ ಅವರು ಮಂಕು ತಿಮ್ಮನ ಕಗ್ಗ ಒಂದನ್ನು ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಡಿವಿಜಿ ನನ್ನ ನೆಚ್ಚಿನ ಬರಹಗಾರ ಎಂದು ಸಂಸದ ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ.
https://www.facebook.com/MPPratapSimha/posts/949608766533160?ref=embed_post
ಸತ್ತೆನೆಂದೆನಬೇಡ, ಸೋತೆನೆಂದನಬೇಡ, ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ
ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆ ತೋರ್ಪುದು ನಾಳೆ
ಸೋಲು ಗೆಲುವು ಸ್ವಾಭಾವಿಕವೇ, ಒಂದು ಸೋಲಾಗಬಹುದು
ಒಂದು ಸಲ ಗೆಲುವಾಗಬಹುದು, ಇಂದು ಬಿದ್ದ ಅಲೆ ನಾಳೆ ಏಳುತ್ತದೆ
ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ
ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ.