ಪ್ರತಿನಿಧಿ ವರದಿ ಕೊಳ್ಳೇಗಾಲ
ಪಟ್ಟಣದ ವಿಶ್ವಚೇತನ ಸಮೂಹ ವಿದ್ಯಾಸಂಸ್ಥೆ ಆವರಣದಲ್ಲಿ ಮಾ.18 ರಂದು ಬೆಳಗ್ಗೆ ಎಚ್.ಕೃಷ್ಣಸ್ವಾಮಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಮತ್ತು ಚಾ.ನಗರದ ಮರಿಯಾಲ ರಕ್ತನಿಧಿ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
18 ವರ್ಷದ ಮೇಲ್ಪಟ್ಟವರು ಹಾಗೂ ದೇಹದ ತೂಕ 50 ಕೆಜಿಗೂ ಹೆಚ್ಚಿರುವವರು ರಕ್ತದಾನದಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ಸಾರ್ವಜನಿಕರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮತ್ತೊಬ್ಬರ ಬದುಕಿಗೆ ನೆರವಾಗಬೇಕು ವಿಶ್ವಚೇತನ ಸಮೂಹ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರವೀಂದ್ರ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.