ಪ್ರತಿನಿಧಿ ವರದಿ ಯಳಂದೂರು
ತಾಲೂಕಿನ ಮಾಂಬಳ್ಳಿ ಗ್ರಾಮದ ಮುಸ್ಲಿಂ ಬಡಾವಣೆಯಲ್ಲಿ ಶಾಸಕ ಎಆರ್ ಕೃಷ್ಣಮೂರ್ತಿ ರಸ್ತೆ ಮತ್ತು ಸಿ ಸಿ ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ವತಿಯಿಂದ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಮಾಂಬಳ್ಳಿ ಗ್ರಾಮದ ಮುಸ್ಲಿಂ ಬಡಾವಣೆಯಲ್ಲಿ ಭೂಮಿ ಪೂಜೆ ಮಾಡಲಾಗಿದ್ದು, ಕಳೆದ 30 ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ನೇನೆಗುದಿಗೆ ಬಿದ್ದಿತ್ತು. ಗ್ರಾಮಸ್ಥರು ಬಂದು ನನ್ನ ಬಳಿ ಮನವಿ ಮಾಡಿದಾಗ ಖಂಡಿತವಾಗಿ ರಸ್ತೆ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದ್ದೆ ಅದರಂತೆ ಇಂದು ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಭೂಮಿ ಪೂಜೆ ಮಾಡಲಾಗಿದೆ ಎಂದರು.
ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯಿಂದ 50 ಲಕ್ಷ ರೂಪಾಯಿ ಮತ್ತು ಉಳಿದ 50 ಲಕ್ಷ ರೂಪಾಯಿಗಳನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನದ ಮುಖಾಂತರ ಪೂರೈಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷ ಮಲ್ಲೇಶ್, ಉಪಾಧ್ಯಕ್ಷ ಮುಬಾರಕ್ ಉನ್ನಿಸಾ, ಗ್ರಾಮ ಪಂಚಾಯತಿ ಸದಸ್ಯ ಮುಜ್ಜು , ಚಿಕ್ಕಲಿಂಗಯ್ಯ, ಮಾಂಬಳ್ಳಿ ಗ್ರಾಮಸ್ಥರು, ವಿವಿಧ ಕೋಮಿನ ಯಜಮಾನರು ಹಾಜರಿದ್ದರು.