ಮೈಸೂರು: ನಂಜನಗೂಡು ತಾಲೂಕಿನ ಸಿಂಧುವಳ್ಳಿಯ ಪಂಪ್ ಸೆಟ್ ಮನೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದೆ. ಗ್ರಾಮದ ಧರಣಿ ಎಂಬುವರ ಪಂಪ್ ಸೆಟ್ ಮನೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದು, ಆತಂಕಗೊಂಡ ಧರಣಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಮರಿಗಳನ್ನ ರಕ್ಷಣೆ ಮಾಡಿದ್ದಾರೆ. ಇನ್ನು ಇದೇ ವೇಳೆ ಕೂಡಲೇ ಬೋನು ಇಟ್ಟು ಚಿರತೆ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.