ಮೈಸೂರು: ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಲಾರಿ ಡ್ರೈವರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣದ ಮುತ್ತುರಾಯ ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ತಮಿಳುನಾಡು ಮೂಲದ ಲಾರಿ ಡ್ರೈವರ್ ಎಂದು ಹೇಳಲಾಗಿದ್ದು, ಮೃತ ಲಾರಿ ಡ್ರೈವರ್ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ರಸ್ತೆ ಬದಿ ಲಾರಿ ನಿಲ್ಲಿಸಿ ನೇಣಿಗೆ ಶರಣಾಗಿದ್ದು, ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.