ಹಾಸನ : ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜೇಶ್ವರಿ ಅವರು ಕಾಂಗ್ರೆಸ್ ಟಿಕೆಟ್ಗಾಗಿ ಭಾರೀ ಪೈಪೋಟಿ ನಡೆಸಿದ್ದರೂ ಕೂಡ ಟಿಕೆಟ್ ಕೈತಪ್ಪಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲೂ ಹಾಸನ ಕ್ಷೇತ್ರದ ಟಿಕೆಟ್ಗಾಗಿ ಲಾಭಿ ನಡೆಸಿದ್ದರು. ಇನ್ನೊಂದೆಡೆ, ಇವರ ಸೋದರಳಿಯ ಶ್ರೇಯಸ್ ಪಟೇಲ್ ಕೂಡ ಟಿಕೆಟ್ಗಾಗಿ ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಶ್ರೇಯಸ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
ಪದೇ ಪದೇ ಕಾಂಗ್ರೆಸ್ ಹೈ ಕಮಾಂಡ್ನಿಂದ ಅನ್ಯಾಯವಾಗುತ್ತಿದೆ ಎಂದು ಆಕ್ರೋಶಗೊಂಡಿರುವ ರಾಜೇಶ್ವರಿ ಅವರು ಹಾಸನದಲ್ಲಿ ಪಕ್ಷೇತರರ ಅಭ್ಯರ್ಥಿಯಾಗಿ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಆ ಮೂಲಕ ಸೋದರಳಿಯನ ವಿರುದ್ದವೇ ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ರಾಜೇಶ್ವರಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲೇ ಬೆಂಬಲಿಗರ ಸಭೆ ಕರೆದು ತೀರ್ಮಾನ ಮಾಡಲು ರಾಜೇಶ್ವರಿ ಮತ್ತು ಕುಟುಂಬಸ್ಥರು ಮುಂದಾಗಿದ್ದಾರೆ. ಇದು ಸಹಜವಾಗಿ ಜಿಲ್ಲಾ ಕಾಂಗ್ರೆಸ್, ರಾಜ್ಯ ಹಾಗೂ ಹೈಕಮಾಂಡ್ ನಾಯಕರಿಗೆ ತಲೆಬಿಸಿ ಮಾಡಿದೆ.