ಮೈಸೂರು: ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ. ಸಾಮಾನ್ಯ ಎಂ.ಪಿ ರೀತಿ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದ್ದಾರೆ. ನಗರದಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲ ಪಕ್ಷದವರೊಂದಿಗೆ ಸಂಬಂಧ ಇದೆ.ನನ್ನ ಪರಿಕಲ್ಪನೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಇದೆ. ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ. ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನರು. ಸಾಮಾನ್ಯ ಎಂಪಿ ರೀತಿ ಕೆಲಸ ಮಾಡುತ್ತೇನೆ. ಆಧುನಿಕ ತಂತ್ರಜ್ಞಾನದ ಮೂಲಕ ಸಂಪರ್ಕ ಇಟ್ಟುಕೊಳ್ಳಬಹುದು. ತುಂಬಾ ದೊಡ್ಡ ನಿರೀಕ್ಷೆ ಇದೆ ಅಂತ ಅನ್ನಿಸುತ್ತಿಲ್ಲ.ನಾನು ರಾಜ ಅಂತ ಹೇಳಿಲ್ಲ. ಅರಮನೆಗೆ ಒಂದು ಪರಂಪರೆ ಇದೆ. ಅದನ್ನು ಹೊರತುಪಡಿಸಿ ನಾನು ಸಾಮಾನ್ಯನಾಗಿ ಇರುತ್ತೇನೆ.ನನ್ನನ್ನು ಸಂಸದ, ಪ್ರತಿನಿಧಿ ಏನು ಬೇಕಾದರೂ ಕರೆಯಿರಿ ಎಂದು ಹೇಳಿದರು.