ಪ್ರತನಿಧಿ ವರದಿ ಚಾಮರಾಜನಗರ
ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು, ಅವರೆ ದೇಶದ ಭವಿಶ್ಯ ಆದರಿಂದ ಮತದಾನ ಬಗ್ಗೆ ಮಕ್ಕಳಿಗೂ ಆರಿವಿರಬೇಕು. ಇದರ ಅಂಗವಾಗಿ ನಗರದ ಜೆ.ಎಸ್.ಎಸ್. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಚಿತ್ರಕಲೆ, ಪ್ರಬಂಧ, ಚರ್ಚಾಸ್ಪರ್ಧೆ, ಕ್ಷೇತ್ರಭೇಟಿ, ನಾಟಕ, ವೀಡಿಯೋ, ಪೋಷಕರಿಗೆ ಪತ್ರ ಬರೆಯುವ ಸ್ಪರ್ಧೆ ಮತ್ತು ಇತರೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆ.ಎಸ್.ಎಸ್.ಬಾಲಕರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿದ್ದಪ್ಪ ಮತದಾನ ಮಹತ್ವದ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು. ಜೆ.ಎಸ್.ಎಸ್.ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ನಾಗೇಶ್ವರಿ ಪ್ರಜಾಪ್ರಭುತ್ವದಲ್ಲಿ ಮತದಾನದ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು.
ಚುನಾವಣಾ ಸಾಕ್ಷರತಾ ಕ್ಲಬ್ ನ ಶಿಕ್ಷಣ ಇಲಾಖೆಯ ಅಧಿಕಾರಿ ನಿರಂಜನ್ ಕುಮಾರ್ ಮಾತನಾಡಿ, 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯು ಮತದಾನ ಮಾಡಬಹುದು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಪರಶಿವಮೂರ್ತಿ, ಬಿ. ರೇವಣ್ಣ, ಇನ್ನಿತರರು ಇದ್ದರು.
18ಸಿಎಚ್ಎನ್.2:
ಚಿತ್ರವಿದೆ