ಮಳವಳ್ಳಿ: ತಾಲೂಕಿನ ನೇಣನೂರು ಗೇಟ್ ಬಳಿಯ ಮೈಸೂರು ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿದ್ದಾರೆ.
ನೇಣನೂರು ಗ್ರಾಮದ ಮಹದೇವಸ್ವಾಮಿ(60) ಮೃತ ವ್ಯಕ್ತಿ.
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿಹೊಡೆದು ಪರಾರಿಯಾಗಿದೆ. ಅಪಘಾತ ದ ತೀವ್ರತೆಗೆ ವ್ಯಕ್ತಿಯ ದೇಹ ಕೈ ಮತ್ತು ಕಾಲು ತುಂಡರಿಸಿಹೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಿರುಗಾವಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಸ್ಥಳಾಂತರಿಸಿದ್ದು, ಸೋಮವಾರ ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರಿಗೆ ಶವವನ್ನು ಒಪ್ಪಿಸಿದ್ದಾರೆ. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.