ಮೈಸೂರು : ಮಹಾರಾಜರೇ, ನೀವು ಕೈ ಮುಗಿದುಕೊಂಡು ಹೋಗಿ ಸಾಕು. ನಿಮ್ಮ ಎಂಪಿ ಹತ್ತು ವರ್ಷದಲ್ಲಿ ಬಹಳ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಅದಕ್ಕೆ ಮತ ಹಾಕ್ತೀವಿ ಅಂತ ಜನ ಹೇಳುತ್ತಾರೆ. ಯಾರ ನಾಮ ಬಲವೂ ಬೇಡ ಎಂದು ಬಿಜೆಪಿ ಪ್ರಚಾರ ಸಭೆಯಲ್ಲಿ ಪ್ರತಾಪ್ ಸಿಂಹ ಅಬ್ಬರದ ಭಾಷಣ ಮಾಡಿದ್ದಾರೆ. ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಗೆಲುವು ಸುಲಭವಾಗುತ್ತೆ. ಹತ್ತು ವರ್ಷಗಳಲ್ಲಿ ಕ್ಷೇತ್ರದ ಮೂಲೆ ಸುತ್ತಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. 1952 ರಿಂದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಹಾದಿಯಾಗಿ ಎಂಪಿಗಳ ಕೆಲಸ ನೋಡಿ. ಕಳೆದ ಹತ್ತು ವರ್ಷಗಳಲ್ಲಿ ಮೋದಿ ಕೊಟ್ಟಿರುವ ಕೊಡುಗೆ, ಪ್ರತಾಪ್ ಸಿಂಹ ಮಾಡಿರುವ ಕೆಲಸ ಗೊತ್ತಾಗುತ್ತದೆ. ಜನರಿಗೆ ಯಾರು ಬೇಕು, ಯಾರು ಬೇಡ ಎನ್ನುವ ಭಾವನೆ ನನಗೆ ಗೊತ್ತಿದೆ. ಅದಕ್ಕಾಗಿ ನಾನು ಈ ಮಾತು ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.