ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರಿಂದ ಮತಬೇಟೆ ಮುಂದುವರಿದ್ದು, ಇಂದು ಮೈಸೂರಿನ ಹೊಯ್ಸಳ ಕರ್ನಾಟಕ ಸಂಘದಲ್ಲಿ ಪ್ರಚಾರ ಸಭೆ ನಡೆಸಿದರು. ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ಮುಖಂಡರ ಸಭೆಯಲ್ಲಿ ಯದುವೀರ್ ಜತೆ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ, ಮಾಜಿ ಮೇಯರ್ ಶಿವಕುಮಾರ್ ಸೇರಿ ಇತರರು ಭಾಗಿಯಾಗಿದ್ದರು.