ಪ್ರತಿನಿಧಿ ವರದಿ ಮೈಸೂರು
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 49ನೇ ಜನ್ಮದಿನಾಚರಣೆ ಅಂಗವಾಗಿ ಮೈಸೂರು ಕನ್ನಡ ವೇದಿಕೆಯಿಂದ ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ರಮ ನಡೆಸಲಾಯಿತು. ಸಿದ್ದಾರ್ಥಬಡಾವಣೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಮಾಜಿ ಉಪಮೇಯರ್ ರೂಪ ಚಾಲನೆ ನೀಡಿದರು. ಬಳಿಕ ಮಾತನಾಡಿ, ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ರಮದ ಮೂಲಕ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಆಚರಿಸುತ್ತಿರುವುದು ಒಳ್ಳೆಯ ಸಂಗತಿ. ಈ ರೀತಿಯ ಕಾರ್ಯಕ್ರಮಗಳ ಮೂಲಕ ಪಕ್ಷಿಗಳ ಸಂಕುಲವನ್ನು ಉಳಿಸಬಹುದಾಗಿದ್ದು, ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಲು ಸಹಕಾರಿಯಾಗಿದೆ ಎಂದರು. ಮೈಸೂರು ಕನ್ನಡ ವೇದಿಕೆ ಅಧ್ಯಕ್ಷ ಎಸ್. ಬಾಲಕೃಷ್ಣ, ಎಲ್ಐಸಿ ಸಿದ್ದಪ್ಪ, ಗೋವಿಂದ್ ರಾಜ್, ಮಾಲಿನಿ, ಪುಷ್ಪಲತಾ, ಪ್ರಕಾಶ್ ಇದ್ದರು.
===============
Leave a comment