ಬೆಳಗಾವಿ, ಮಾರ್ಚ್ 20: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ರಿಂದ ಅಧಿಕಾರ ದುರುಪಯೋಗದ ಆರೋಪ ಕೇಳಿಬಂದಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗುತ್ತಿದ್ದಂತೆಯೇ ಸಚಿವೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಜತೆ ಸಭೆ ನಡೆಸಿದ್ದಾರೆ. ಮಗ ಮೃಣಾಲ್ ಪರ ಕೆಲಸ ಮಾಡುವಂತೆ ಮತ್ತು ಮತ ಹಾಕಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ಬೆಳಗಾವಿಯ ಕುವೆಂಪು ನಗರದ ಗೃಹ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಜತೆ ಲಕ್ಷ್ಮೀ ಹೆಬ್ಬಾಳ್ಕರ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ 500ಕ್ಕೂ ಅಧಿಕ ಕಾರ್ಯಕರ್ತೆಯರು ಇದ್ದರು.