ಪ್ರತಿನಿಧಿ ವರದಿ ಕೃಷ್ಣರಾಜಪೇಟೆ
ಕಣ್ಣಿನ ದೃಷ್ಟಿ ಕಳೆದುಕೊಂಡರೆ ಇಡೀ ಲೋಕವೇ ಕತ್ತಲಾಗಿ ಜೀವನವನ್ನು ಕಗ್ಗತ್ತಲಿನಲ್ಲಿ ಕಳೆಯಬೇಕಾಗುತ್ತದೆ. ಆದ್ದರಿಂದ ಕಣ್ಣಿನ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ ಎಂದು ಧರ್ಮಸ್ಥಳ ಸಂಸ್ಥೆಯ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕ ಜಯರಾಂ ನೆಲ್ಲಿತ್ತಾಯ ಮನವಿ ಮಾಡಿದರು.
ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಹೊನ್ನಾರು ವೇದಿಕೆಯ ಸಭಾಂಗಣದಲ್ಲಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮ ಮತ್ತು ಕಾವೇರಿ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ನಾವು ಪ್ರಕೃತಿ ಸೇರಿದಂತೆ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ವೀಕ್ಷಿಸಿ ಕಣ್ತುಂಬಿಕೊಳ್ಳಬೇಕಾದರೆ ಕಣ್ಣಿನ ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಅತೀ ಅಗತ್ಯವಾಗಿದೆ. ಪ್ರಕೃತಿಯ ಸೊಬಗನ್ನು ಸವಿಯಲು ದೈನಂದಿನ ಕೆಲಸ ಕಾರ್ಯಗಳನ್ನು ಮಾಡಲು ಕಣ್ಣಿನ ದೃಷ್ಟಿಯು ಅಗತ್ಯವಾಗಿ ಬೇಕಾಗಿರುವುದರಿಂದ ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ಯುವಜನರು ನಿಯಮಿತವಾಗಿ ಕಣ್ಣಿನ ಪರೀಕ್ಷೆ ಮಾಡಿಸಿಕೊಂಡು ಕಣ್ಣಿನ ಆರೋಗ್ಯದ ಬಗ್ಗೆ ಎಚ್ಚರವಾಗಿರಬೇಕು ಎಂದರು.
ಧರ್ಮಸ್ಥಳ ಸಂಸ್ಥೆಯ ಚನ್ನರಾಯಪಟ್ಟಣ ಜಿಲ್ಲಾ ನಿರ್ದೇಶಕ ಕೇಶವದೇವಾಂಗ ಮಾತನಾಡಿದರು.
ಧರ್ಮಸ್ಥಳ ಜನಜಾಗೃತಿ ವೇದಿಕೆಯ ನಿರ್ದೇಶಕ ಎ.ಆರ್.ರಘು, ತಜ್ಞ ವೈದ್ಯರಾದ ಡಾ.ಚಂದನ, ತಾಲೂಕು ಯೋಜನಾಧಿಕಾರಿ. ಮಮತಾಶೆಟ್ಟಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಲೋಕೇಶ್, ಅಕ್ಕಿಹೆಬ್ಬಾಳು ವಲಯದ ಮೇಲ್ವಿಚಾರಕಿ ಶಿಲ್ಪಾ, ಮುಖಂಡರಾದ ಎ.ಜಿ.ಕುಮಾರ್, ಮಹಾಲಿಂಗಣ್ಣ, ಜಮೀರ್ಅಹಮದ್, ವಾಸುರಾಜೇಗೌಡ, ಮಹೇಶನಾಯಕ್ ಮತ್ತಿತರರು ಭಾಗವಹಿಸಿದ್ದರು. ಶಿಬಿರದಲ್ಲಿ ೨೦೦ಕ್ಕೂ ಹೆಚ್ಚಿನ ಗ್ರಾಮೀಣ ಜನರು ಚಿಕಿತ್ಸೆಗೆ ಒಳಗಾದರು.
Leave a comment