ಪ್ರತಿನಿಧಿ ವರದಿ ತಿ.ನರಸೀಪುರ
ಮೈಸೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರಾಗಿ ಕುರುಬೂರು ಶಿವಶಂಕರ್ (ಶಿವು) ಅವರು ಆಯ್ಕೆಯಾಗಿದ್ದಾರೆ.
ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹಾದೇವಸ್ವಾಮಿ ಅವರು ಮೈಸೂರು ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷರಾಗಿ ಶಿವಶಂಕರ್, ತಿ.ನರಸೀಪುರ ಕಾರ್ಯಾಲಯದ ಕಾರ್ಯದರ್ಶಿಯಾಗಿ ನಂದನ್, ಸಹಕಾರ್ಯದರ್ಶಿ ಹರೀಶ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.