ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಸಲಹೆ
ತುಮಕೂರು : ಆಸ್ಪತ್ರೆಯಲ್ಲಿ ಸ್ವಚ್ಛತೆ, ನೈರ್ಮಲ್ಯ ಮತ್ತು ಸೋಂಕು ನಿಯಂತ್ರಣವನ್ನು ಉತ್ತೇಜಿಸುವಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಗಮನಹರಿಸಬೇಕು ಎಲ್ಲರೂ ಸೇರಿ ಒಂದು ತಂಡದ ರೀತಿಯಲ್ಲಿ ಉತ್ತಮ ಕಾರ್ಯ ನಿರ್ವಹಣೆ ಮಾಡಿ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಮತ್ತು ಸೇವೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು.
ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ವಿಶ್ವ ಶ್ರವಣ ದಿನ ಹಾಗೂ ಕಾಯಕಲ್ಪ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಡಿ. ಎನ್.ಮಂಜುನಾಥ್ ಮಾತನಾಡಿ, ಈ ದಿನ ನಾವು ವಿಶ್ವ ಶ್ರವಣ ದಿನವನ್ನು ಆಚರಿಸುತ್ತಿದ್ದು, ಶ್ರವಣ ನ್ಯೂನತೆ ಹಾಗೂ ಶ್ರವಣ ಆರೈಕೆ ಬಗ್ಗೆ ಹೆಚ್ಚು ಗಮನಹರಿಸುವಂತಾಗಬೇಕು. ಈ ನಿಟ್ಟಿನಲ್ಲಿ ಹುಟ್ಟಿದ 24 ಗಂಟೆಗಳ ನಂತರ ಹೆರಿಗೆ ವಾರ್ಡ್ಗಳಲ್ಲಿಯೇ ಶ್ರವಣದೋಷವನ್ನು ಪತ್ತೆಹಚ್ಚಲು ಶ್ರವಣದೋಷದ ಪರೀಕ್ಷೆ ನಮ್ಮಲ್ಲಿ ನಡೆಯುತ್ತಿದ್ದು ನವಜಾತ ಶಿಶುಗಳ ಶ್ರವಣ ತಪಾಸಣೆಯನ್ನು ಅತ್ಯಂತ ಯಶಸ್ವಿಯಾಗಿ ತಾಲೂಕು ಮಟ್ಟದಲ್ಲಿಯೂ ವಾಣ ಡೆಫ್ ಚಿಲ್ಡ್ರನ್ ಫೌಂಡೇಶನ್ ಅವರ ಸಹಯೋಗದೊಂದಿಗೆ ನಡೆಸುತ್ತಿದ್ದೇವೆ ಎಂದು
ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ರೇಖಾ ಕೆ.ಬಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಅಸ್ಗರ್ ಬೇಗ್, ಆರ್.ಸಿ.ಎಚ್.ಒ ಮೋಹನ್, ಜಿಲ್ಲಾ ಕುಷ್ಟರೋಗ ಅಧಿಕಾರಿ ರವೀಂದ್ರ ನಾಯಕ್, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾಕ್ಟರ್ ಚಂದ್ರಶೇಖರ್ ಉಪಸ್ಥಿತರಿದ್ದರು.
ಬಾಕ್ಸ್
ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣ್ ಕಾರ್ಯಕ್ರಮದ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದರು. 2021 -22 ಮತ್ತು 2022 -23ನೇ ಸಾಲಿನ ಜಿಲ್ಲಾಮಟ್ಟದ ಕಾಯಕಲ್ಪ ಪ್ರಶಸ್ತಿಯನ್ನು ಜಿಲ್ಲಾ ಆಸ್ಪತ್ರೆ, ವಿವಿಧ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ ಮತ್ತು ಆಯುಷ್ಮಾನ್ ಆರೋಗ್ಯ ಮಂದಿರಗಳಿಗೆ ವಿತರಿಸಲಾಯಿತು.