ನಂಜನಗೂಡಿನ ಸುಜಾತಪುರಂ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಸದ್ಯದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ. ಆ ಮೂಲಕ ಪ್ರವಾಸಿಗರು, ಅಂತಾರಾಜ್ಯ ಪ್ರಯಾಣಿಕರು ಹಾಗೂ ಸ್ಥಳೀಯರ ದಶಕದ ಬೇಡಿಕೆ ಕೊನೆಗೂ ಈಡೇರಿದಂತಾಗಿದೆ. ದಕ್ಷಿಣ ಕಾಶಿ ನಂಜನಗೂಡಿಗೆ ಬರುವ ಭಕ್ತರು, ಈ ಹಾದಿ ಮೂಲಕ ನಾನಾ ಪ್ರೇಕ್ಷಣೀಯ ಸ್ಥಳಗಳಿಗೆ ತೆರಳಬಹುದು. ತಮಿಳುನಾಡು ಸೇರಿದಂತೆ ಅಂತಾರಾಜ್ಯಕ್ಕೆ ತೆರಳುವವರಿಗೆ ಅನುಕೂಲವಾಗುವ ರೈಲ್ವೇ ಮೇಲ್ಸೇತುವೆ ನಿರ್ಮಾಣ ಮುಕ್ತಾಯ ಹಂತಕ್ಕೆ ಬಂದಿದೆ.