ಹುಬ್ಬಳ್ಳಿ : ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿರುವ ಸಭಾಪತಿ ಹೊರಟ್ಟಿ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ಅಂಗೀಕರಿಸಿದ ಹೊರಟ್ಟಿ, ನಾನು ಎಲ್ಲವನ್ನು ಪ್ರಶ್ನೆ ಮಾಡಿದ್ದೇನೆ. ತಿಬ್ಬೇಗೌಡರು ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು. ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಮುಂದಿನ ಅವಧಿಗೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಸಭಾಪತಿಗಳು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ. ಸಭಾಪತಿಗೆ ಧನ್ಯವಾದಗಳು ಎಂದರು. ಅಲ್ಲದೆ, ಹೆಚ್ಡಿ ದೇವೇಗೌಡ, ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ ಅವರು ಪಕ್ಷಕ್ಕೂ ಗುಡ್ಬೈ ಹೇಳಿದ್ದಾರೆ.
ಕೆಲವು ವಯಕ್ತಿಕ ಕಾರಣದಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ. ನಾನು ಜನತಾ ದಳದಿಂದ ಎರಡು ಬಾರಿ ಟಿಕೆಟ್ ಪಡೆದಿದ್ದೆ. ಎರಡು ಬಾರಿ ಜನತಾದಳದಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಗೆದ್ದಿದೆ. ಈ ಅವಧಿಯಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಆಗಿದ್ದೆ. ನನ್ನ ರಾಜಕೀಯ ಪ್ರಾರಂಭವಾಗಿದ್ದು ಜನತಾ ದಳದಿಂದ. ಕೆಲವು ಸಲ ವಿಧಾನ ಪರಿಷತ್ ಹಾಗೂ ವಿಧಾನಸಭೆ ಟಿಕೆಟ್ ನನಗೆ ಸಿಗಲಿಲ್ಲ ಎಂದರು.