ಮದ್ದೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಗುಣಮುಖರಾಗಲಿ ಎಂದು ಹಾರೈಸಿ, ಮದ್ದೂರು ಜೆಡಿಎಸ್ ವತಿಯಿಂದ ಪಟ್ಟಣದ ಶ್ರೀ ಉಗ್ರ ನರಸಿಂಹ ಸ್ವಾಮಿ ದೇಗುಲ ಹಾಗೂ ಹೊಳೆ ಆಂಜನೇಯ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ ಅವರು ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರೈತ ಮತ್ತು ಜನಪರ ಕೆಲಸ ಮಾಡುವ ಮೂಲಕ ರಾಜ್ಯದ ರಾಜ್ಯದಲ್ಲಿ ಮನೆ ಮಾತಾಗಿದ್ದಾರೆ ಅಂತಹ ರೈತ ನಾಯಕನ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು ಶೀಘ್ರ ಗುಣಮುಖರಾಗಿ ಸಕ್ರಿಯ ರಾಜಕಾರಣಕ್ಕೆ ಮರಳಲಿ ಎಂದು ಹಾರೈಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕ ತಿಮ್ಮೇಗೌಡ ಅವರು ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕುಮಾರಸ್ವಾಮಿಯವರೇ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ ಅತಿ ಹೆಚ್ಚಿನ ಹಂತಗಳ ಅಂತರದ ಮತಗಳಿಂದ ಗೆಲುವು ಸಾಧಿಸಲಿದ್ದಾರೆ. ಅವರ ಗೆಲುವಿನ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಮತ್ತೊಮ್ಮೆ ಜೆಡಿಎಸ್ ಅಲೆ ಸೃಷ್ಟಿಯಾಗಲಿದೆ ಎಂದರು.
ಪುರಸಭಾ ಸದಸ್ಯರಾದ ಎಸ್.ಮಹೇಶ್, ಪ್ರಮೀಳಾ ವನಿತಾ ಬಸವರಾಜು ಎಂಐ ಪ್ರವೀಣ್, ತೈಲೂರು ಪ್ರಸನ್ನ, ಆದಿಲ್ ಆಲಿಖಾನ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ. ಸಂದರ್ಶ, ಜೆಡಿಎಸ್ ಮಹಿಳಾ ತಾಲೂಕು ಘಟಕದ ಅಧ್ಯಕ್ಷ ದಿವ್ಯ ರಾಮಚಂದ್ರ ಶೆಟ್ಟಿ ಮುಖಂಡರಾದ ಅಪ್ಪು ಪೇ ಗೌಡ ರವಿ ಹೋಳಿಗೆರೆಶೇಕರ್ ಮಲ್ಲರಾಜು ಶಿವನಂಜಪ್ಪ ಬಿಳಿಯಪ್ಪ ಬಸವರಾಜು ಡಿಸಿ ಮಹೇಂದ್ರ, ವಳಗೆರಹಳ್ಳಿ ಪ್ರಜ್ವಲ್, ಸೊದೆ ನಿಂಗಯ್ಯ, ಪುಟ್ಟಸ್ವಾಮಿ, ಗೂಳೇಶ್, ರಾಧಕೃಷ್ಣ ಸೇರಿದಂತೆ ಇತರರು ಇದ್ದರು.