ಪ್ರತಿನಿಧಿ ವರದಿ ಯಳಂದೂರು
ಪಟ್ಟಣ ಹಾಗೂ ತಾಲೂಕಿನ ಎಲ್ಲ ಮತಗಟ್ಟೆಗಳಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಿ ಚುನಾವಣೆ ಯಶಸ್ವಿಗೊಳಿಸಬೇಕು ಎಂದು ಪ.ಪಂ.ಮುಖ್ಯಾಧಿಕಾರಿ ಮಹೇಶ್ ಕುಮಾರ್ ಮನವಿ ಮಾಡಿದರು.
ಪಟ್ಟಣದಲ್ಲಿ ಜಿಲ್ಲಾ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಸೂಕ್ತವಾದ ಅಭ್ಯರ್ಥಿ ಆಯ್ಕೆ ಮಾಡಿ ಎಂದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಜಾಥದಲ್ಲಿ ‘ನಮ್ಮ ಮತ ನಮ್ಮ ಹಕ್ಕು’ ತಪ್ಪದೇ ಮತದಾನ ಮಾಡಿ ‘ಎಂದು ಜಾಗೃತಿ ಘೋಷಣೆಗಳನ್ನು ಕೂಗಲಾಯಿತು.
ಇಂಜಿನಿಯರ್ ನಾಗೇಂದ್ರ, ಪ.ಪಂ.ಸಿಬ್ಬಂದಿ ಪರಶಿವ ಮೂರ್ತಿ, ದೊಡ್ಡ ಬಸವಣ್ಣ, ಲಕ್ಷ್ಮೀ, ಮಲ್ಲು, ಜಯಲಕ್ಷ್ಮೀ ಸೇರಿದಂತೆ ಪೌರಕಾರ್ಮಿಕರು ಮತ್ತು ಅಂಗನವಾಡಿ ಆಶಾ ಕಾರ್ಯಕರ್ತರು ಹಾಜರಿದ್ದರು.