ಬೆಂಗಳೂರು : ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಕ್ರಮ ಪ್ರಶ್ನಿಸಿದ್ದ ಸಿ.ಎಂ.ಇಬ್ರಾಹಿಂ ದಾವೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ವಜಾ ಮಾಡಲಾಗಿದೆ. ಹೆಚ್.ಡಿ.ದೇವೇಗೌಡ ಮತ್ತು ಹೆಚ್ಡಿ ಕುಮಾರಸ್ವಾಮಿ ಪ್ರತಿವಾದಿಯಾಗಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ಇಬ್ರಾಹಿಂ ಅರ್ಜಿ ಸಲ್ಲಿಸಿದ್ದರು. ಪದಾಧಿಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷರ ನೇಮಕ ಪ್ರಶ್ನಿಸಿದ್ದರು. ಈ ವೇಳೆ ದಾವೆ ಊರ್ಜಿತವಲ್ಲವೆಂದು ಹೆಚ್ಡಿ ಕುಮಾರಸ್ವಾಮಿ ಪರ ವಕೀಲ ನಿಶಾಂತ್ ವಾದಿಸಿದ್ದಾರೆ.
ಉಚ್ಛಾಟಿನೆ ಬಳಿಕ ಸಿಎಂ ಇಬ್ರಾಹಿಂ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿದ ವರಿಷ್ಠರ ಕ್ರಮ ಪ್ರಶ್ನಿಸಿ ಇಬ್ರಾಹಿಂ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ ಅವರನ್ನು ಪ್ರತಿವಾದಿಯಾಗಿಸಿದ್ದರು.
ಜೆಡಿಎಸ್ ವರಿಷ್ಠರು ಯಾವುದೇ ಮುನ್ಸೂಚನೆ ನೀಡದೇ ತಮ್ಮನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಸಿಟಿ ಸಿವಿಲ್ ಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ತಮ್ಮನ್ನು ಕಾನೂನು ಬಾಹಿರವಾಗಿ ಉಚ್ಚಾಟನೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ವಕೀಲ ಶತಬೀಷ್ ಹಾಗೂ ಶಿವಣ್ಣ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿ ಕೋರ್ಟ್ನಲ್ಲಿ ವಿಚಾರಣೆ ಮಾಡಲಾಗಿದೆ.