ಮೈಸೂರು : ಬಿಜೆಪಿ ಅಭ್ಯರ್ಥಿ ಬಗ್ಗೆ ಮಾತನಾಡಲ್ಲ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿದೆ ಎಂದು ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ನಗರದಲ್ಲಿ ಕಾಂಗ್ರೆಸ್ ಸಂವಾದದಲ್ಲಿ ಮಾತನಾಡಿದ ಅವರು, ಹಾಲಿ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಸಿಕ್ಕಿಲ್ಲ. ಅದರ ಬಗ್ಗೆಯೂ ನಾವು ಮಾತನಾಡಲ್ಲ. ಚುನಾವಣಾ ಪ್ರಚಾರದ ವೇಳೆ ಹಾಲಿ ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಸುಖಾಸುಮ್ಮನೆ ಹೇಳಿಕೆಗಳನ್ನು ನೀಡಬಾರದು. ಜನರ ಸಮಸ್ಯೆಗೆ ಸ್ಪಂದಿಸಲು ನಮ್ಮ ಅಭ್ಯರ್ಥಿ ಲಭ್ಯವಾಗುತ್ತಾರೆ. ಬಡತನ, ಹಸಿವು ಮುಕ್ತಗೊಳಿಸಲು ರಾಜ್ಯ ಸರ್ಕಾರ ಕೊಟ್ಟಿರುವ ಯೋಜನೆಗಳು ಸಹಕಾರಿ ಆಗಲಿವೆ. ಪಂಚ ಗ್ಯಾರಂಟಿ ಯೋಜನೆಗಳು ನಮಗೆ ಶ್ರೀರಕ್ಷೆ. ತಂಬಾಕು ಬೆಳೆಗಾರರ ಸಮಸ್ಯೆ, ಮೈಸೂರಿಗೆ ಅಂತಾರಾಷ್ಟ್ರೀಯ ಮನ್ನಣೆ, ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ. ದ್ವೇಷ, ವಿಷ ಬೀಜ ಬಿತ್ತುವುದು ನಮ್ಮ ಕೆಲಸ ಅಲ್ಲ. ಮೌಲ್ಯಾಧಾರಿತ ರಾಜಕಾರಣ ಮಾಡುತ್ತೇವೆ ಎಂದು ಹೇಳಿದರು.