ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಗನ್ಗಳನ್ನು ಹಿಂದಿರುಗಿಸಲು ಸೂಚನೆ ನೀಡಿದೆ. ಇದೇ ವೇಳೆ ರೌಡಿಶೀಟರ್ ಗಳ ಬಳಿಯೂ ಗನ್ ಇರುವುದು ಬೆಳಕಿಗೆ ಬಂದಿದೆ. ಅಶೋಕ್ ಅಡಿಗ ಸೇರಿದಂತೆ ಒಟ್ಟು 6 ರೌಡಿಶೀಟರ್ಗಳ ಬಳಿ ಗನ್ಗಳಿವೆ. ಈ ವಿಚಾರ ತಿಳಿಯುತ್ತಿದ್ದಂತೆ ಕೋಪಗೊಂಡ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.