ಮೈಸೂರು : ರಾಜ್ಯದೆಲ್ಲೆಡೆ ಸದ್ಯ ಬರ ಆವರಿಸಿದೆ. ಜನರು ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಿಂದ ಕಪಿಲೆ ನದಿಗೆ 1000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಕಪಿಲೆ ತಮಿಳುನಾಡು ಅಥವಾ ಬೆಂಗಳೂರು ಎಲ್ಲಿಗೆ ಹರಿಯುತ್ತಿದ್ದಾಳೆ ಎನ್ನುವ ಪ್ರಶ್ನೆ ಮೂಡಿದೆ. ಸದ್ಯ ಜಲಾಶಯದಿಂದ ಪ್ರತಿನಿತ್ಯ 1 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. 84 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 66 ಅಡಿಗೆ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ನೀರಿನ ಪ್ರಮಾಣ ಇದೀಗ ಸಾಕಷ್ಟು ಅನುಮಾನ ಮೂಡಿಸಿದೆ.