ಮಂಡ್ಯ: ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.
ಶ್ರೀಜಗದ್ಗುರು ರೇಣುಕಾಚಾರ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಂಡ್ಯ ಜಿಲ್ಲಾ ಬಸವ ಸಮಿತಿಯ ಅಧ್ಯಕ್ಷ ಎಂ.ಬಿ.ರಾಜಶೇಖರ್ ಮಾತನಾಡಿದರು.
ಜಗದ್ಗುರು ರೇಣುಕಾಚಾರ್ಯ ಸೇವಾ ಟ್ರಸ್ಟ್ ನ ಖಜಾಂಚಿ ರುದ್ರಸ್ವಾಮಿ, ಮಂಡ್ಯ ಜಿಲ್ಲಾ ಬಸವ ಸಮಿತಿಯ ಕಾರ್ಯದರ್ಶಿ ಎಚ್.ಕೆ.ಕೆಂಪಯ್ಯ, ಜಿಲ್ಲಾ ವೀರಶೈವ ನೌಕರರ ಸಹಕಾರಿ ಸಂಘದ ಅಧ್ಯಕ್ಷ ರಮೇಶ್, ಮಂಡ್ಯ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಎಸ್.ಶಿವಪ್ರಕಾಶ್, ಪ್ರಶಾಂತ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಆನಂದ, ಸುಧಾ, ದೇವರಾಜು, ಸುಧಾ, ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ರೇಣುಕಾಚಾರ್ಯ ಸೇವಾ ಟ್ರಸ್ಟ್ ವತಿಯಿಂದ ಸಿಹಿ ಹಂಚಲಾಯಿತು.
—————-