ಮೈಸೂರು: ಚಾಮರಾಜನಗರ, ಮೈಸೂರು ಕ್ಷೇತ್ರವನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಸ್ವತಃ ತಾವೇ ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಎರಡು ಕ್ಷೇತ್ರ ಗೆಲ್ಲಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದು, ಇಂದು ಚಾಮರಾಜನಗರ, ಮೈಸೂರು ಕ್ಷೇತ್ರದ ಶಾಸಕರು, ಮಾಜಿ ಶಾಸಕರು, ಪಕ್ಷದ ಪ್ರಮುಖರ ಜೊತೆ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆ ಸಂಬಂಧ ಕೈ ಶಾಸಕರ ಜತೆ ಸಿಎಂ ಚರ್ಚೆ ಮಾಡಲಿದ್ದು, ಸಿಎಂ ಸಿದ್ದರಾಮಯ್ಯ ಎಂಟ್ರಿಯಿಂದ ಮೈಸೂರು, ಚಾಮರಾಜನಗರ ಕಣ ಮತ್ತಷ್ಟು ರಂಗೇರಲಿದೆ. ಇನ್ನು ಮೈಸೂರು ಕೊಡಗು ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಎಂ ಲಕ್ಷ್ಮಣ್, ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸುನಿಲ್ ಬೋಸ್ ಹೆಸರು ಫೈನಲ್ ಆಗಿದೆ.