ಪ್ರತಿನಿಧಿ ವರದಿ ಕೋಲಾರ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಾರಿ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಯನ್ನು ಮಾ.25ರಂದು ಸರಳವಾಗಿ ಆಚರಿಸಲಾಗುವುದೆಂದು ಯೋಗಿ ನಾರಾಯಣ ಬಲಿಜ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಪ್ರಸಾದ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತವು ಜಯಂತಿಯನ್ನು ಸರಳವಾಗಿ ಆಚರಿಸಲು ಅನುಮತಿ ನೀಡಿರುವುದರಿಂದ ಯಾವುದೇ ಮೆರವಣಿಗೆ ವೇದಿಕೆ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಮಾಡದೆ, ಸರಳ ಹಾಗೂ ಸಾಂಕೇತಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಅಂದು ಬೆಳಗ್ಗೆ ೯ ಗಂಟೆಗೆ ನಗರದ ಟೇಕಲ್ ರಸ್ತೆಯಲ್ಲಿರುವ ಯೋಗಿನಾರೇಯಣ ಯತೀಂದ್ರರ ಪುತ್ಥಳಿಗೆ ಪೂಜೆ ಸಲ್ಲಿಸಿ, ನಂತರ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಬೆಳಗ್ಗೆ ೧೦ ಗಂಟೆಗೆ ಜಿಲ್ಲಾ ಆಡಳಿತ ಸಾಂಕೇತಿಕವಾಗಿ ನಡೆಸುವ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಯನ್ನು ಸಮುದಾಯದ ಎಲ್ಲ ಜನತೆ ಭಾಗವಹಿಸಲಿದ್ದಾರೆಂದು ತಿಳಿಸಿದರು.
ನಿವೃತ್ತ ಪೋಲಿಸ್ ಅಧಿಕಾರಿ ವೆಂಕಟಸ್ವಾಮಿ ಮಾತನಾಡಿದರು. ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ರಘು ಚಿಟ್ಟಿ, ಸಮುದಾಯದ ಮುಖಂಡರಾದ ರಂಗನಾಥ್, ಎಸ್.ಎಸ್.ಶ್ರೀಧರ್, ಗಾಂಧಿನಗರ ರಾಜೇಶ್, ಮಹೇಶ್, ಎಂ.ಜಿ.ಮಂಜುನಾಥ್, ಗೋವರ್ಧನ್ ಮುಂತಾದವರು ಉಪಸ್ಥಿತರಿದ್ದರು.
Leave a comment