ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ವ್ಯಾಪ್ತಿಯಲ್ಲಿ ಸೋಮವಾರ ಎಸ್ಎಸ್ಎಲ್ ಸಿಯ ಮೊದಲ ವಿಷಯವಾದ ಕನ್ನಡ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ಬೆಟ್ಟದಪುರದ ಪರೀಕ್ಷಾ ಕೇಂದ್ರವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ಒಟ್ಟು 235 ವಿದ್ಯಾರ್ಥಿಗಳು, ಎಸ್ಎಂಎಸ್ ವಿದ್ಯಾಸಂಸ್ಥೆಯಲ್ಲಿ 234ಕ್ಕೆ 232 ವಿದ್ಯಾರ್ಥಿಗಳು, ಸಮೀಪದ ಹಾರನಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 171ಕ್ಕೆ 170 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದರು. ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯವನ್ನು ಒದಗಿಸಲಾಗಿತ್ತು. ಪರೀಕ್ಷಾ ಕೇಂದ್ರದ ಬಳಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಯಾವುದೇ ಸಮಸ್ಯೆಯಾಗದಂತೆ ಕಟ್ಟೆಚ್ಚರವಹಿಸಲಾಗಿತ್ತು.
Leave a comment